ಮಂಗಳಂ ಜಯ ಮಂಗಳಂ

ಮಂಗಳಂ ಜಯ ಮಂಗಳಂ

ನಿಗಮವ ತಂದಾ ಮತ್ಸ್ಯಾವತಾರಗೆ
ನಗವ ಬೆನ್ನಲಿ ಪೊತ್ತ ಕೂರ್ಮನಿಗೆ
ಜಗವನುದ್ಧರಿಸಿದ ವರಾಹಾವತಾರಗೆ
ಮಗುವಿನ ಕಾಯ್ದ ಮುದ್ದು ನರಸಿಂಹಗೆ

ಭೂಮಿಯ ದಾನವ ಬೇಡಿದಗೆ
ಮಹಾ ಅರಸರ ಗೆಲಿದವಗೆ
ರಾಮಚಂದ್ರನೆಂಬ ಸ್ವಾಮಿಗೆ ಸತ್ಯ-
ಭಾಮೆಯ ಅರಸ ಗೋಪಾಲಕೃಷ್ಣಗೆ

ಬತ್ತಲೆ ನಿಂತಿಹ ಬುದ್ಧನಿಗೆ
ಉತ್ತಮ ಹಯವನೇರಿದ ಕಲ್ಕಿಗೆ
ಹತ್ತವತಾರದಿ ಭಕ್ತರ ಸಲಹಿದ

ನಿತ್ಯ ಶ್ರೀ ಪುರಂದರವಿಠಲನಿಗೆ

No comments: