ಯಾರೆ ಬಂದವರು ಮನೆಗೆ

ಯಾರೆ ಬಂದವರು ಮನೆಗೆ ಮತ್ಯಾರೆ ಬಂದವರು
ನಾರಾಯಣ ಕೃಷ್ಣ ನಾಥನಲ್ಲದೆ ಬೇರೆ

ವಜ್ರರೇಖೆಗಳಿವೆ ಮನೆಯಲ್ಲಿ ಕಾಲ
ಗೆಜ್ಜೆ ಧ್ವನಿ ಕೇಳಿ ಬರುತಿದೆ
ವಜ್ರಮಾಣಿಕ್ಯವೆಲ್ಲ ಹರಿದು ಬಿದ್ದಿವೆ
ಮಜ್ಜಿಗೆಯೊಳಗೆ ಕಾಣ್ವ ಬೆಣ್ಣೆಯ ಕಾಣೆ

ಕೊಂಬು ಕೊಳಲು ರಭಸಗಳಿವೆ
ಕದಂಬ ಕಸ್ತೂರಿ ಪೆಂಪೆಸೆದಿವೆ
ಪೂಂಬಟ್ಟೆ ಚಲ್ಲಣ ಚಲ್ಲಿದೆ ಹಾಲು
ಕುಂಭ ಒಡೆದು ಮನೆತುಂಬ ಬೆಳ್ಳಗಾಯಿತು 

ಮಿಂಚು ಹುಳದಂತೆ ಹೊಳೆವುತ ತಮ್ಮ
ಸಂಚರರೊಡಗೂಡಿ ಚಲಿಸುತ್ತ
ವಂಚಿಸಿ ಬೆಣ್ಣೆಯ ಮೆಲ್ಲುತ ನಮ್ಮ
ಲಂಚದ ಪುರಂದರವಿಠಲನಲ್ಲದೆ ಬೇರೆ

ರಾಗ: ಸೌರಾಷ್ಟ್ರ       ತಾಳ: ಅಟ್ಟ

1. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: